Skip to main content

ಮಂಜು ಮುಸುಕಿದ ಹಾದಿ @ ವಿದ್ಯಾರೆಡ್ಡಿ

ಶೀಲವಿಲ್ಲದ ಶೀಲಾ, ವಿದ್ಯೆಯಿಲ್ಲದ ಮುಗ್ದೆ ಶೀಲಾ, ಬೆಳ್ಳಗಿರುವುದೆಲ್ಲ ಹಾಲು, ಹೊಳೆಯುವುದೆಲ್ಲಾ ಚಿನ್ನ ಎಂದು ನಂಬಿದ ಶೀಲಾ, ಆಧುನಿಕ ಪ್ರಪಂಚದ ಚಕ್ರವ್ಯೂಹದೊಳಗೆ ಬಂಧಿಯಾದ ಶೀಲಾ....ಶೀಲಾಳ ಕತೆ ಓದುತ್ತಾ ಹೋದಂತೆ ಕಣ್ಣೆವೆಗಳು ಆರ್ದ್ರವಾಗುತ್ತವೆ. ಪ್ರಸ್ತುತ ಲೋಕದ ಕನ್ನಡಿಯಂತೆ ಚಿತ್ರಿತವಾಗಿದೆ ಶ್ರೀಮತಿ ವಿದ್ಯಾರೆಡ್ಡಿಯವರ ಮಂಜು ಮುಸುಕಿದ ಹಾದಿ.
ಮಂಜು ಮುಸುಕಿದ ಹಾದಿ ನಮ್ಮೆಲ್ಲರನ್ನೂ ಸುಲಭವಾಗಿ ಓದಿಸಿಕೊಂಡು ಹೋಗುವುದರೊಂದಿಗೆ ಚಿಂತನೆಗೂ ಹಚ್ಚುತ್ತದೆ. ಕಾದಂಬರಿಯ ಪಾತ್ರಗಳು ನಮ್ಮ ಸುತ್ತಲಿನ ವ್ಯಕ್ತಿಗಳಲ್ಲಿಯೇ ಅಂತರ್ಗತವಾಗುತ್ತ ಹೋಗುವುದು ಇದರ ವಿಶೇಷ. ಶ್ರೀಮತಿ ವಿದ್ಯಾರೆಡ್ಡಿಯವರು ಕಾದಂಬರಿಯುದ್ದಕ್ಕೂ ಓದುಗರನ್ನು ಕರೆದುಕೊಂಡು ಹೋಗುತ್ತಾರೆ. ಇಲ್ಲಿ ಓದುಗರಿಗೂ ಹಾಗೂ ನಿರೂಪಕರಿಗೂ ಅರಿವಾಗದಂತೆಯೇ ಒಂದು ರೀತಿ ಆಪ್ತತೆ ಬೆಳೆದು ಬಿಡುತ್ತದೆ.
ಕಾದಂಬರಿಯ ಕಥಾವಸ್ತುವಿಗೆ ಬರುವುದಾದರೆ ಇಲ್ಲಿ ಶೀಲಾಳ ಜೀವನವೇ ಪ್ರಮುಖವಾಗಿದ್ದು ಕ್ರೌರ್ಯವು ಹೇಗೆ ಮುಗ್ಧತೆಯನ್ನು ಆವರಿಸಿಕೊಳ್ಳುತ್ತಾ ಹೋಗಿ ಕೊನೆಗೆ ಆಹುತಿಯನ್ನು ಪಡೆಯುತ್ತದೆ ಎಂಬುವುದನ್ನು ಕಾಣಬಹುದಾಗಿದೆ. ನರಸಾಪೂರವೆಂಬ ಹಳ್ಳಿಯ ಕುಟುಂಬವೊಂದರಿಂದ ಆರಂಭವಾಗುವ ಕತೆ ಶೀಲಾಳ ಅಪ್ಪನ ಸಾವಿನೊಂದಿಗೆ ಓಘವನ್ನು ಪಡೆದುಕೊಳ್ಳುತ್ತದೆ. ಸ್ವರ್ಗ ನರಕಗಳು ಬೇರಿಲ್ಲ, ಈಗ ಮಾಡಿರುವುದನ್ನು ಇಲ್ಲಿಯೇ ತೀರಿಸಬೇಕು ಎಂಬ ತತ್ವವನ್ನು ನಾವು ಕತೆಯಲ್ಲಿ ಗಮನಿಸಬಹುದು. ಮುಗ್ಧರ ಸುಲಿಗೆ ಮಾಡಿದ ಶೀಲಾಳ ಅಪ್ಪ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿದ್ದು, ಅಕ್ಕ ಮಾಲಾಳ ಗಂಡ ತನ್ನ ಕುತಂತ್ರದಿಂದಾಗಿ ಬಾಯಿಬಿದ್ದು ಹೋಗಿ ನರಳಾಡಿದ್ದು, ಮಾಲಾಳ ಸವತಿ ಹರಕು ಬಾಯಿಯವಳು ಕೊನೆಗೆ ಕ್ಯಾನ್ಸರ್ ಬಂದು ಸಾವನ್ನಪ್ಪಿದ್ದು ಅದಕ್ಕೆ ಉದಾಹರಣೆಗಳಾಗಿವೆ.
ಒಂದು ಕುಟುಂಬ ಸಂಸ್ಕಾರ ಹೀನವಾಯಿತೆಂದರೆ ಅದು ಹೇಗೆ ಇಡೀ ಕುಟುಂಬಕ್ಕೆ ಶಾಪವಾಗಿ ಪರಿಣಮಿಸುತ್ತದೆ ಎಂಬುವುದನ್ನು ಕಾದಂಬರಿ ಓದಿ ತಿಳಿದುಕೊಳ್ಳಬಹುದಾಗಿದೆ. ಹೆಣ್ಣು ಮಕ್ಕಳ ಶಿಕ್ಷಣದ ಅವಶ್ಯಕತೆ ಬಗ್ಗೆ ಕತೆಯು ಆಗ್ರಹಿಸುತ್ತದೆ. ಒಂದು ಹಂತದಲ್ಲಿ ಇಂದಿನ ಸಮಾಜವು ಮುಗ್ಧರಿಗಲ್ಲ, ಮಾನವಂತರಿಗಲ್ಲ ಎಂಬುವುದು ಈ ಕತೆಯ ಮೂಲಕ ಸಾಬೀತಾಗುತ್ತದೆ.
ಅಕ್ಕ ಮಾಲಾ ಯಾರೊಂದಿಗೊ ಓಡಿ ಹೋಗಿ ವಿವಾಹವಾದರೂ ಶೀಲಾಳಿಗೆ ಒದಗಿದ ಸಂಕಷ್ಟ ಅವಳಿಗಿಲ್ಲ. ತಮ್ಮ ಉಂಡಾಡಿ ಗುಂಡನೂ ತನ್ನ ಸ್ವೇಚ್ಛೆಯ ಅನುಸಾರವಾಗಿಯೇ ಬದುಕಿ ಸಾಯುವವನು. ಆದರೆ ಏನೂ ಅರಿಯದ ಶೀಲಾ ಕುಟುಂಬವನ್ನೇ ಎತ್ತಿ ಹಿಡಿಯಲು ಹವಣಿಸಿ ಕೊನೆಗೂ ಸೋಲನ್ನೊಪ್ಪಿ ಅಸಹಾಯಕಳಾಗುತ್ತಾಳೆ.
ಶೀಲಾಳ ಬದುಕಿನಲ್ಲಿ ಮೇಷ್ಟ್ರು, ಶಿವರಾಜ ಹಾಗೂ ದುರುಳ ಮಹೇಶ ಸ್ವಲ್ಪ ಪ್ರಮಾಣದಲ್ಲಿ ಬೆಳಕು ತರುತ್ತಾರೆನೋ ಅಂದುಕೊಳ್ಳುತ್ತಲೇ ಅವರೂ ಜೀವನಪ್ರವಾಹದಲ್ಲಿ ತೇಲಿಹೋಗುವ ತರಗೆಲೆಗಳಾಗುತ್ತಾರೆಯೆ ಹೊರತು ವಿಶೇಷವಾದ ಪವಾಡವನ್ನೇನೂ ಸೃಷ್ಟಿಸುವುದಿಲ್ಲ.
ಪಾತ್ರಗಳಾಚೆ ನಿಂತು ನೋಡುವುದಾದರೇ ಹೆಣ್ಣಿಗೆ ಪ್ರಸ್ತುತ ಸಮಾಜದಲ್ಲಿ ಸ್ವಾತಂತ್ರ್ಯದ ಅಗತ್ಯತೆಯನ್ನು ಒತ್ತಿ ಹೇಳಲಾಗಿದೆ. ಮಗನಿಂದಲೂ ಶೀಲಾ ತಿರಸ್ಕಾರಕ್ಕೆ ಒಳಗಾದಾಗ ಮುಂದಿರುವ ದಾರಿ ಅದೊಂದೆ..
ಕಾದಂಬರಿಯಲ್ಲಿ ಗ್ರಾಮದ ಚಿತ್ರಣವನ್ನು ಕೊಡುವಲ್ಲಿ ಲೇಖಕರು ಯಶಸ್ವಿಯಾಗಿದ್ದಾರೆ. ಶೀಲಾ ಸೋತರೂ ಕಾದಂಬರಿ ಗೆಲ್ಲುತ್ತದೆ.
                      - ಶ್ರೀ ಆನಂದ ಮಾಲಗಿತ್ತಿಮಠ
                         ಸಾಹಿತಿಗಳು , ಬೈಲಹೊಂಗಲ
                         ಮೊ: 9964471102

Comments

  1. ಕಾದಂಬರಿಯ ಪರಿಚಯ ಓದಿದಾಗ.. ಕೃತಿಯನ್ನು ಓದುವ ಹಂಬಲ ಹುಟ್ಟು ಹಾಕಿದ ಲೇಖನ.

    ReplyDelete

Post a Comment

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ

ಇವುಗಳನ್ನೂ ಓದಿ

ವರ್ಧನ ಸಾಮ್ರಾಜ್ಯದ ಇತಿಹಾಸ

ವರ್ಧನ ಸಾಮ್ರಾಜ್ಯದ ಇತಿಹಾಸ ಗುಪ್ತ ಸಾಮ್ರಾಜ್ಯದ ಅವನತಿಯ ನಂತರ ಉತ್ತರ ಭಾರತದಲ್ಲಿ ಅನೇಕ ಚಿಕ್ಕ ಚಿಕ್ಕ ಸಂಸ್ಥಾನಗಳು ಸ್ಥಾಪಿಸಲ್ಪಟ್ಟವು. ಅವುಗಳಲ್ಲಿ ವರ್ಧನ ಸಾಮ್ರಾಜ್ಯವೂ ಒಂದು. ಈ ಸಾಮ್ರಾಜ್ಯದ ಸ್ಥಾಪಕ ಪ್ರಭಾಕರ ವರ್ಧನ. ಅವನ ರಾಜಧಾನಿ ಥಾನೇಶ್ವರ. ಹೀಗಾಗಿ ಇವರನ್ನು ಥಾನೇಶ್ವರದ ವರ್ಧನರೆಂದೂ ಕರೆಯುತ್ತಿದ್ದರು. ಪ್ರಭಾಕರ ವರ್ಧನ ಶಕ್ತಿಶಾಲಿಯೂ ಶೂರನೂ ಆಗಿದ್ದನು. ಆತನಿಗೆ ರಾಜವರ್ಧನ, ಹರ್ಷವರ್ಧನ ಹಾಗೂ ರಾಜಶ್ರೀಯೆಂಬ ಮೂವರು ಮಕ್ಕಳಿದ್ದರು. ಪ್ರಭಾಕರ ವರ್ಧನನ ಮರಣದ ನಂತರ ರಾಜವರ್ಧನನು ಪಟ್ಟಕ್ಕೆ ಬಂದನು. ಆದರೆ ಧುರ್ಧೈವದಿಂದ ಆತನ ಕೊಲೆಯಾಗುತ್ತದೆ. ಹೀಗಾಗಿ ಹರ್ಷವರ್ಧನನು ಕ್ತಿ.ಶ.606 ರಿಂದ ಕ್ರಿ.ಶ 647 ರವರೆಗೆ ರಾಜ್ಯಭಾರ ಮಾಡುತ್ತಾನೆ.  ಹರ್ಷವರ್ಧನನು ಮಾಳ್ವ ಹಾಗೂ ಕನೋಜದ ಮೇಲೆ ದಂಡೆತ್ತಿ ಹೋಗಿ ಸದೆಬಡಿಯುತ್ತಾನೆ.ಹರ್ಷವರ್ಧನನ ತಂಗಿ ರಾಜಶ್ರೀಯನ್ನು ಮೌಖೇರಿಯ ಗೃಹವರ್ಮನಿಗೆ ವಿವಾಹ ಮಾಡಿ ಕೊಡಲಾಗಿರುತ್ತದೆ. ಮಾಳ್ವದ ದೇವಗುಪ್ತನು ಗೃಹವರ್ಮನನ್ನು ಕೊಲೆಗೈದು, ರಾಜಶ್ರಿಯನ್ನು ಬಂಧನದಲ್ಲಿಟ್ಟಿರುತ್ತಾನೆ. ಇದನ್ನು ಸಹಿಸದ ಅಂದಿನ ರಾಜ ರಾಜವರ್ಧನನು ಆತನ ಮೇಲೆ ದಂಡೆತ್ತಿಹೋಗಿ ಸೋಲಿಸಿರುತ್ತಾನೆ. ಮುಂದೆ ಗೌಡ ದೇಶದ ಶಶಾಂಕನು ಮಿತ್ರನ ವೇಷ ಧರಿಸಿ ಬಂದು ರಾಜವರ್ಧನನ ಕೊಲೆ ಮಾಡುತ್ತಾನೆ. ಹರ್ಷವರ್ಧನ ಹರ್ಷವರ್ಧನನು ಬಲುಶಕ್ತಿಶಾಲಿ ಸಾಮ್ರಾಟನಾಗಿದ್ದು ಸುಮಾರು 40 ವರ್ಷಗಳ ಕಾಲ ಆಳ್ವಿಕೆ ನಡೆಸಿದ. ಆತನ ಸಾಮ್ರಾಜ್ಯವು ಉತ್ತರದಲ್ಲಿ