Skip to main content

ಗಜಲ್@ ಆನಂದ ಮಾಲಗಿತ್ತಿಮಠ

ಸುಮ್ಮನಿರಲಾರದೆ ಬರಿ ಧರ್ಮವೆಂದೇ ಅಷ್ಟೇ ನಾನೇನೂ ಮಾಡಿರಲಿಲ್ಲ
ಕೋಮುವಾದಿ ಎಂಬ ಬಿರುದು ಕೊಟ್ಟರಂದೇ ನಾನೇನೂ ಮಾಡಿರಲಿಲ್ಲ

ತ್ರಾಸಿನಲಿ ಬರಿ ಪ್ರಾಸಗಳ ಜೋಡಿಸಿ, ಅಕ್ಷರಗಳ ಮಾಲೆ ಹೆಣೆದಿದ್ದೆ ಅಷ್ಟೇ
ಕವಿಯೆಂದು ಕರೆದು ಪ್ರಶಸ್ತಿ ನೀಡಿಯೇ ಬಿಟ್ಟರಂದೇ ನಾನೇನೂ ಬರೆದಿರಲಿಲ್ಲ

ಖಾದಿಯ ತೊಟ್ಟು ಓಣಿಯ ನಾಲ್ಕಾರು ಕದನಗಳನು ಬಗೆಹರಿಸಿದ್ದೆ ಅಷ್ಟೇ
ರಾಜಕಾರಣಿಯೆಂದು ಜನ ಜೈಕಾರ ಹಾಕಿದರಂದೇ ನಾನೇನೂ ಮಾಡಿರಲಿಲ್ಲ

ಪರದೆಯ ಮುಂದೆ ನಿಲ್ಲಿಸಿದಾಗ ಬರಿ ಬಾಯಿ ಬಡಿದೆ ಮೂಗನಂತೆ ಅಷ್ಟೇ
ನಟಚಕ್ರವರ್ತಿಯೆಂದು ಪುತ್ಥಳಿಯನೇ ಮಾಡಿಟ್ಟರಂದೇ ನಾನೇನೂ ನಟಿಸಿರಲಿಲ್ಲ

ಎದೆ ಎದೆ ಬಡಿದುಕೊಂಡು 'ಆನಂದ' ವಿರದೆ  ಹಸಿವು ಎಂದು ಕೂಗಿದೆ ಅಷ್ಟೇ
ಅನ್ನದ ಬಟ್ಟಲ ಕಸಿದು  ಸಾಯಿ ಮಗನೇ ಅಂದರಂದೇ ನಾನೇನೂ ಬದುಕಲಿಲ್ಲ

ಈ ಗಜಲ್ ನ್ನೂ ಓದಿ

Comments

  1. ಗಜಲ್ ನಿಮಗೆ ಸಿದ್ಧಿಸಿದೆ ಅಷ್ಟೇ

    ReplyDelete

Post a Comment

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ

ಇವುಗಳನ್ನೂ ಓದಿ

ಕವಿಗಳಾಧರಿತ ಪ್ರಶ್ನೆಗಳು

1."ಆದಿಕವಿ" ಮತ್ತು "ಕನ್ನಡದ ಕಾವ್ಯ ಪಿತಾಮಹ" ಎಂದು ಯಾರನ್ನು ಕರೆಯುತ್ತಾರೆ? A). ಪಂಪ B). ರನ್ನ C). ಜನ್ನ D). ಪೊನ್ನ Correct Ans: (A) Description: ಪಂಪ ಪಂಪ ಒಬ್ಬ ಪ್ರಸಿದ್ಧ ಕನ್ನಡದ ಕವಿ. ಪಂಪನ ಪ್ರಮುಖ ಎರಡು ಕಾವ್ಯಗಳೆಂದರೆ ಒಂದು ಆದಿಪುರಾ...