Skip to main content

ಗಝಲ್ @ ಆನಂದ ಮಾಲಗಿತ್ತಿಮಠ

ಆ ಮತ ಈ ಮತವೆಂಬ ಹಂಗೇತಕೋ ಬರಿ ಮತದಾರನಾಗು ಸಾಕು
ಪಟವಾಗಿ ಬಾನೆತ್ತರ ನಾನೇರುವೆ ನೀನದಕೆ ಬರಿ ದಾರವಾಗು ಸಾಕು

ಚಿಗುರಿ ಹಬ್ಬುತ ನಲಿದು ನನ್ನವರಿಗೆ ನೆರಳಾಗಿ ಅವರೂ ಚಿಗುರಬೇಕು
ಬುಡದಲಿ ಬೆವರು ಸುರಿಸುವ ಬಡ ತೊಗಲಿನ ಕೂಲಿಯಾಗು ಸಾಕು

ನಾನಾಳುವವನು ಅಳುವುದಿಲ್ಲ ಅತ್ತರದು ಬರಿ ಬಹಿರಂಗದ ನಾಟಕ
ಮಹಿಯನೊಡೆಯನಾಗಲು ಮಾಡುವ ಪೂಜೆಗೆ ಬಲಿಯಾಗು ಸಾಕು

ಮೈಯೊಣಗಿ ನಾರಿದರೇನು ಕುಶಲವಾಗಿರಲಿ ಕಡೆತನ ತೋರು ಬೆರಳು 
ತೇರಿನಲಿ ಸಾಗುವವನು ನಾನು  ಭಾರ ಹೊರುವ ಗಾಲಿಯಾಗು ಸಾಕು

ಅರ್ಧರಾತ್ರಿಯಲಿ ಅಥರ್ವನಿಗೆ ಎಚ್ಚರಾಗಿ ಬುದ್ದನಾದರೂ ಚಿಂತೆಯಿಲ್ಲ
ಪ್ರಶ್ನಿಸಿ ಪ್ರಬುದ್ಧನಾಗದೇ ನನಗೇ ನೇತಾಡುವ ಬಾವಲಿಯಾಗು ಸಾಕು

ಇದನ್ನೂ ಓದಿ








 

Comments

Post a Comment

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ

ಇವುಗಳನ್ನೂ ಓದಿ

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು 1) ದಾಮೋದರ್ ನದಿ ಕಣಿವೆ ಯೋಜನೆ:- ದಾಮೋದರ್ ಅಣೆಕಟ್ಟು ಸ್ವತಂತ್ರ್ಯ ಭಾರತದ ಮೊಟ್ಟಮೊದಲ ಬೃಹತ್ ಅಣೆಕಟ್ಟು ಆಗಿದೆ. ದಾಮೋದರ್ ಕಣಿವೆ ಕಾರ್ಪೋರೇಷನ್ ನನ್ನುಜುಲೈ 7, 1948 ರಲ್ಲಿ ಸಂವಿಧಾನ ರಚನಾ ಸಭೆಯ ಕಾಯ್ದೆ ಮೂಲಕ ಸ್ಥಾಪಿಸಲಾಯಿತು. ಇದನ್ನು ಅಮೇರಿಕಾದ ಟೆನಿಸ್ಸಿ ಕಣಿವೆ ಯೋಜನೆ ಮಾದರಿಯಲ್ಲಿ ರಚಿಸಲಾಗಿದೆ. ದಾಮೋದರ್ ಕಣಿವೆ ಯೋಜನೆಯನ್ನುಭಾರತದ ರೋರ್ ಎಂದು ಕರೆಯುತ್ತಾರೆ. ಏಕೆಂದರೇ ದಾಮೋದರ್ ಕಣಿವೆ ಪ್ರದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಕಂಡುಬರುತ್ತವೆ. ಆದ್ದರಿಂದ ಇದಕ್ಕೆ ಭಾರತದ ’ರೋರ್’ ಎಂದು ಕರೆಯುತ್ತಾರೆ. ದಾಮೋದರ್ ಕಣಿವೆಯು ಭಾರತದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಒಂದು. ಈ ಪ್ರದೇಶದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಕೈಗಾರಿಕೆಗಳಾದ ಬೋಕಾರೋ (ಜಾರ್ಕಂಡ್ ನಲ್ಲಿದೆ), ಬರ್ನಾಪೂರ, ದುರ್ಗಾಪುರ (ಪಶ್ಚಿಮ ಬಂಗಾಳ)ದಲ್ಲಿ ಸ್ಥಾಪನೆಯಾಗಿವೆ. ಇಲ್ಲಿ ಅಧಿಕ ಪ್ರಮಾಣಾದ ಕಲ್ಲಿದ್ದಲು ಗಣಿಗಳಿವೆ. # ದಾಮೋದರ್ ನದಿಯ ಉಪನದಿಯಾದ ಬರ್ಕರ್ ನದಿಗೆ ಅಡ್ದಲಾಗಿ 1953 ರಲ್ಲಿತಿಲಾಯ ಅಣೆಕಟ್ಟು ಕಟ್ಟಲಾಗಿದೆ. # 1995 ರಲ್ಲಿ ದಾಮೋದರ್ ನದಿಯ ಇನ್ನೊಂದು ಉಪನದಿಯಾದ ಕೋನಾರ್ನದಿಗೆ ಅಣೆಕಟ್ಟು ಕಟ್ಟಲಾಗಿದೆ. # ದಾಮೋದರ್ ನದಿಯು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹರಿಯುವ ನದಿಯಾಗಿದೆ. # ದಾಮೋದರ್ ನದಿಯನ್ನು ಪಶ್ಚಿಮ ಬಂಗಾಳದ ಕಣ್ಣೀರಿನ ನ...