Skip to main content

ಗಝಲ್ @ ಆನಂದ ಮಾಲಗಿತ್ತಿಮಠ

ಆ ಮತ ಈ ಮತವೆಂಬ ಹಂಗೇತಕೋ ಬರಿ ಮತದಾರನಾಗು ಸಾಕು
ಪಟವಾಗಿ ಬಾನೆತ್ತರ ನಾನೇರುವೆ ನೀನದಕೆ ಬರಿ ದಾರವಾಗು ಸಾಕು

ಚಿಗುರಿ ಹಬ್ಬುತ ನಲಿದು ನನ್ನವರಿಗೆ ನೆರಳಾಗಿ ಅವರೂ ಚಿಗುರಬೇಕು
ಬುಡದಲಿ ಬೆವರು ಸುರಿಸುವ ಬಡ ತೊಗಲಿನ ಕೂಲಿಯಾಗು ಸಾಕು

ನಾನಾಳುವವನು ಅಳುವುದಿಲ್ಲ ಅತ್ತರದು ಬರಿ ಬಹಿರಂಗದ ನಾಟಕ
ಮಹಿಯನೊಡೆಯನಾಗಲು ಮಾಡುವ ಪೂಜೆಗೆ ಬಲಿಯಾಗು ಸಾಕು

ಮೈಯೊಣಗಿ ನಾರಿದರೇನು ಕುಶಲವಾಗಿರಲಿ ಕಡೆತನ ತೋರು ಬೆರಳು 
ತೇರಿನಲಿ ಸಾಗುವವನು ನಾನು  ಭಾರ ಹೊರುವ ಗಾಲಿಯಾಗು ಸಾಕು

ಅರ್ಧರಾತ್ರಿಯಲಿ ಅಥರ್ವನಿಗೆ ಎಚ್ಚರಾಗಿ ಬುದ್ದನಾದರೂ ಚಿಂತೆಯಿಲ್ಲ
ಪ್ರಶ್ನಿಸಿ ಪ್ರಬುದ್ಧನಾಗದೇ ನನಗೇ ನೇತಾಡುವ ಬಾವಲಿಯಾಗು ಸಾಕು

ಇದನ್ನೂ ಓದಿ








 

Comments

Post a Comment

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ

ಇವುಗಳನ್ನೂ ಓದಿ

ಕೃತಿಗಳು ಮತ್ತು ಕೃತಿಕಾರರು

ಕನ್ನಡದ 100 ಶ್ರೇಷ್ಠ ಸಾಹಿತ್ಯ ಕೃತಿಗಳು 1.ಕಾನೂರು ಹೆಗ್ಗಡಿತಿ - ಕುವೆ೦ಪು 2.ಮಲೆಗಳಲ್ಲಿ ಮದುಮಗಳು - ಕುವೆ೦ಪು 3.ಚಿದಂಬರ ರಹಸ್ಯ - ಪೂರ್ಣಚಂದ್ರ ತೇಜಸ್ವಿ 4. ಜುಗಾರಿ ಕ್ರಾಸ್ - ಪೂರ್ಣಚಂದ್ರ ತೇಜಸ್ವಿ 3.ಮರಳಿ ಮಣ್...