Skip to main content

ಗಝಲ್ @ ಆನಂದ ವೀ ಮಾಲಗಿತ್ತಿಮಠ

ಮಣ್ಣು ಹೊತ್ತ ಹೆಗಲಿಗಂದು ಸುರಿಸಿದ ಬೆವರು ಗೊತ್ತಿತ್ತು
ಉರಿದ ಕಣ್ಣಿಗಂದು ಧೂಳುದುರಿ ಹರಿದ ‌ಕಣ್ಣೀರು ಗೊತ್ತಿತ್ತು

ಇಟ್ಟಿಗೆಗಳ ಜೋಡಿಸುವಾತನು ಬರೀ  ಗೋಡೆಯನು ಕಟ್ಟಿದ
ಮೂಢನಿಗಲ್ಲಿ ಮೂಡಿ ಬಂದ ಆಕಾರದ ಹೆಸರು ಗೊತ್ತಿತ್ತು

ದಣಿದು ತಾ ಕುಣಿದು ಉಳಿಯು ಮೂಡಿಸಿದ್ದು ಶಿಲ್ಪಚಿತ್ತಾರ
ಕಿಡಿಹಾರಲಲ್ಲೂ ಚಳಿಕಾಯಿಸುವ ಜನ ಮೂಳರು ಗೊತ್ತಿತ್ತು

ಮಂದಿರವೋ ಮಸೀದಿಯೋ ಮತ್ತೊಂದೋ ಏನಿದೆಯೋ
ಗೋಡೆಯ ಗೂನು ಬೆನ್ನಿಗಲ್ಲಿ ಹೊರುವ ತೊಡರು ಗೊತ್ತಿತ್ತು

ಮತ್ತೆ ಮತ್ತೆ ಹಳೆಯ ಗೋಡೆಗಳ ಗೊಡವೆಯೇಕೆ 'ಅಥರ್ವಾ'
ಗುಂಬಜಕ್ಕೂ ಅಂಬುಜಕ್ಕೂ ಭಾವವೊಂದೇ 'ದೇವರು' ಗೊತ್ತಿತ್ತು

Comments

Post a Comment

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ

ಇವುಗಳನ್ನೂ ಓದಿ

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು

ಭಾರತದ ಮುಖ್ಯ ವಿವಿದೋದ್ದೇಶ ನದಿಕಣಿವೆ ಯೋಜನೆಗಳು 1) ದಾಮೋದರ್ ನದಿ ಕಣಿವೆ ಯೋಜನೆ:- ದಾಮೋದರ್ ಅಣೆಕಟ್ಟು ಸ್ವತಂತ್ರ್ಯ ಭಾರತದ ಮೊಟ್ಟಮೊದಲ ಬೃಹತ್ ಅಣೆಕಟ್ಟು ಆಗಿದೆ. ದಾಮೋದರ್ ಕಣಿವೆ ಕಾರ್ಪೋರೇಷನ್ ನನ್ನುಜುಲೈ 7, 1948 ರಲ್ಲಿ ಸಂವಿಧಾನ ರಚನಾ ಸಭೆಯ ಕಾಯ್ದೆ ಮೂಲಕ ಸ್ಥಾಪಿಸಲಾಯಿತು. ಇದನ್ನು ಅಮೇರಿಕಾದ ಟೆನಿಸ್ಸಿ ಕಣಿವೆ ಯೋಜನೆ ಮಾದರಿಯಲ್ಲಿ ರಚಿಸಲಾಗಿದೆ. ದಾಮೋದರ್ ಕಣಿವೆ ಯೋಜನೆಯನ್ನುಭಾರತದ ರೋರ್ ಎಂದು ಕರೆಯುತ್ತಾರೆ. ಏಕೆಂದರೇ ದಾಮೋದರ್ ಕಣಿವೆ ಪ್ರದೇಶದಲ್ಲಿ ಅತಿ ಹೆಚ್ಚು ಕೈಗಾರಿಕೆಗಳು ಕಂಡುಬರುತ್ತವೆ. ಆದ್ದರಿಂದ ಇದಕ್ಕೆ ಭಾರತದ ’ರೋರ್’ ಎಂದು ಕರೆಯುತ್ತಾರೆ. ದಾಮೋದರ್ ಕಣಿವೆಯು ಭಾರತದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಒಂದು. ಈ ಪ್ರದೇಶದಲ್ಲಿ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ಕೈಗಾರಿಕೆಗಳಾದ ಬೋಕಾರೋ (ಜಾರ್ಕಂಡ್ ನಲ್ಲಿದೆ), ಬರ್ನಾಪೂರ, ದುರ್ಗಾಪುರ (ಪಶ್ಚಿಮ ಬಂಗಾಳ)ದಲ್ಲಿ ಸ್ಥಾಪನೆಯಾಗಿವೆ. ಇಲ್ಲಿ ಅಧಿಕ ಪ್ರಮಾಣಾದ ಕಲ್ಲಿದ್ದಲು ಗಣಿಗಳಿವೆ. # ದಾಮೋದರ್ ನದಿಯ ಉಪನದಿಯಾದ ಬರ್ಕರ್ ನದಿಗೆ ಅಡ್ದಲಾಗಿ 1953 ರಲ್ಲಿತಿಲಾಯ ಅಣೆಕಟ್ಟು ಕಟ್ಟಲಾಗಿದೆ. # 1995 ರಲ್ಲಿ ದಾಮೋದರ್ ನದಿಯ ಇನ್ನೊಂದು ಉಪನದಿಯಾದ ಕೋನಾರ್ನದಿಗೆ ಅಣೆಕಟ್ಟು ಕಟ್ಟಲಾಗಿದೆ. # ದಾಮೋದರ್ ನದಿಯು ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹರಿಯುವ ನದಿಯಾಗಿದೆ. # ದಾಮೋದರ್ ನದಿಯನ್ನು ಪಶ್ಚಿಮ ಬಂಗಾಳದ ಕಣ್ಣೀರಿನ ನ...