Skip to main content

ಗಝಲ್ @ ಆನಂದ ವೀ ಮಾಲಗಿತ್ತಿಮಠ

ಮಣ್ಣು ಹೊತ್ತ ಹೆಗಲಿಗಂದು ಸುರಿಸಿದ ಬೆವರು ಗೊತ್ತಿತ್ತು
ಉರಿದ ಕಣ್ಣಿಗಂದು ಧೂಳುದುರಿ ಹರಿದ ‌ಕಣ್ಣೀರು ಗೊತ್ತಿತ್ತು

ಇಟ್ಟಿಗೆಗಳ ಜೋಡಿಸುವಾತನು ಬರೀ  ಗೋಡೆಯನು ಕಟ್ಟಿದ
ಮೂಢನಿಗಲ್ಲಿ ಮೂಡಿ ಬಂದ ಆಕಾರದ ಹೆಸರು ಗೊತ್ತಿತ್ತು

ದಣಿದು ತಾ ಕುಣಿದು ಉಳಿಯು ಮೂಡಿಸಿದ್ದು ಶಿಲ್ಪಚಿತ್ತಾರ
ಕಿಡಿಹಾರಲಲ್ಲೂ ಚಳಿಕಾಯಿಸುವ ಜನ ಮೂಳರು ಗೊತ್ತಿತ್ತು

ಮಂದಿರವೋ ಮಸೀದಿಯೋ ಮತ್ತೊಂದೋ ಏನಿದೆಯೋ
ಗೋಡೆಯ ಗೂನು ಬೆನ್ನಿಗಲ್ಲಿ ಹೊರುವ ತೊಡರು ಗೊತ್ತಿತ್ತು

ಮತ್ತೆ ಮತ್ತೆ ಹಳೆಯ ಗೋಡೆಗಳ ಗೊಡವೆಯೇಕೆ 'ಅಥರ್ವಾ'
ಗುಂಬಜಕ್ಕೂ ಅಂಬುಜಕ್ಕೂ ಭಾವವೊಂದೇ 'ದೇವರು' ಗೊತ್ತಿತ್ತು

Comments

Post a Comment

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ

ಇವುಗಳನ್ನೂ ಓದಿ

ಕವಿಗಳಾಧರಿತ ಪ್ರಶ್ನೆಗಳು

1."ಆದಿಕವಿ" ಮತ್ತು "ಕನ್ನಡದ ಕಾವ್ಯ ಪಿತಾಮಹ" ಎಂದು ಯಾರನ್ನು ಕರೆಯುತ್ತಾರೆ? A). ಪಂಪ B). ರನ್ನ C). ಜನ್ನ D). ಪೊನ್ನ Correct Ans: (A) Description: ಪಂಪ ಪಂಪ ಒಬ್ಬ ಪ್ರಸಿದ್ಧ ಕನ್ನಡದ ಕವಿ. ಪಂಪನ ಪ್ರಮುಖ ಎರಡು ಕಾವ್ಯಗಳೆಂದರೆ ಒಂದು ಆದಿಪುರಾ...