Skip to main content

ನನ್ನವರು@ ಆನಂದ ಮಾಲಗಿತ್ತಿಮಠ 'ಗಜಲ್'

ಆ ಮುಳ್ಳು ಅಮಾಯಕತೆಯ ಪ್ರತೀಕ ಬಿಡಿ ಚುಚ್ಚಿದ್ದು ನನ್ನವರೆ.
ಆ ಚಿನ್ನದ ಕತ್ತಿಯದೇನೂ ತಪ್ಪಿರಲಿಲ್ಲ ಬೆನ್ನಿಗಿರಿದಿದ್ದು ನನ್ನವರೆ.

ನಂಬಿಕೆಯ ಅರಮನೆ ಸುಡುತಿರಲು ಕರಿ ಬೂದಿಯ ಕಲರವ
ಕಣ್ಣೀರು ಸುರಸಿ ನಂದಿಸಲು ಬರಬೇಡಿ ಸುಟ್ಟಿದ್ದು ನನ್ನವರೆ.

ಸ್ನೇಹದ ಪರಿಮಳದಲ್ಲಿ ಕೊಳೆತ ಶವದ ವಾಸನೆಯು ಬೆರೆತಿದೆ
ಅದು ಮೋಸವೆಂದು ಚಿತ್ಕರಿಸಿ ಸಾರಬೇಡಿ ಮಾಡಿದ್ದು ನನ್ನವರೆ.

ಗಾಜಿನ ಮನಸ್ಸಿಗೆ ಒಡೆವ ಕಲ್ಲಿನ ಮೇಲೆಯೆ ಮೋಹ ಜಾಸ್ತಿ
ತಾಗಿದರೂ ಚುಂಬನವೆಂದು ತಿಳಿದುಬಿಡಿ ಎಸೆದದ್ದು ನನ್ನವರೆ.

ಮೈಮರೆತು ಮಲಗಿದರೂ ಸಮಾಧಿಯೆಳೆದು ಶೋಕಿಸುತ್ತಾರಿಲ್ಲಿ 
ಮುಖವಾಡಗಳನು ದೂರುತ್ತಿಲ್ಲ ಅಥರ್ವಾ ತೊಟ್ಟಿದ್ದು ನನ್ನವರೆ

Comments

  1. ನಿಮ್ಮ ಕವನ ಬಹಳ ಸುಂದರವಾಗಿದೆ.
    ಅದರಲ್ಲಿಯ ಹತಾಶೆ,ನೋವು,ಕೊನೆಗೆ ಎಲ್ಲವನ್ನೂ ಒಪ್ಪಿಕೊಳ್ಳುವ ಸಹನೆ ಹಾಗು ಕ್ಷಮಾಗುಣ ಮನಮುಟ್ಟುತ್ತದೆ.

    ReplyDelete
    Replies
    1. ತಮ್ಮ ಮೆಚ್ವುಗೆಗೆ ಧನ್ಯವಾದಗಳು

      Delete
  2. ಈ ಕವನ ತುಂಬಾ ಅರ್ಥ ಗರ್ಭಿತವಾಗಿದೆ

    ReplyDelete

Post a Comment

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...