Skip to main content

ನನ್ನವರು@ ಆನಂದ ಮಾಲಗಿತ್ತಿಮಠ 'ಗಜಲ್'

ಆ ಮುಳ್ಳು ಅಮಾಯಕತೆಯ ಪ್ರತೀಕ ಬಿಡಿ ಚುಚ್ಚಿದ್ದು ನನ್ನವರೆ.
ಆ ಚಿನ್ನದ ಕತ್ತಿಯದೇನೂ ತಪ್ಪಿರಲಿಲ್ಲ ಬೆನ್ನಿಗಿರಿದಿದ್ದು ನನ್ನವರೆ.

ನಂಬಿಕೆಯ ಅರಮನೆ ಸುಡುತಿರಲು ಕರಿ ಬೂದಿಯ ಕಲರವ
ಕಣ್ಣೀರು ಸುರಸಿ ನಂದಿಸಲು ಬರಬೇಡಿ ಸುಟ್ಟಿದ್ದು ನನ್ನವರೆ.

ಸ್ನೇಹದ ಪರಿಮಳದಲ್ಲಿ ಕೊಳೆತ ಶವದ ವಾಸನೆಯು ಬೆರೆತಿದೆ
ಅದು ಮೋಸವೆಂದು ಚಿತ್ಕರಿಸಿ ಸಾರಬೇಡಿ ಮಾಡಿದ್ದು ನನ್ನವರೆ.

ಗಾಜಿನ ಮನಸ್ಸಿಗೆ ಒಡೆವ ಕಲ್ಲಿನ ಮೇಲೆಯೆ ಮೋಹ ಜಾಸ್ತಿ
ತಾಗಿದರೂ ಚುಂಬನವೆಂದು ತಿಳಿದುಬಿಡಿ ಎಸೆದದ್ದು ನನ್ನವರೆ.

ಮೈಮರೆತು ಮಲಗಿದರೂ ಸಮಾಧಿಯೆಳೆದು ಶೋಕಿಸುತ್ತಾರಿಲ್ಲಿ 
ಮುಖವಾಡಗಳನು ದೂರುತ್ತಿಲ್ಲ ಅಥರ್ವಾ ತೊಟ್ಟಿದ್ದು ನನ್ನವರೆ

Comments

  1. ನಿಮ್ಮ ಕವನ ಬಹಳ ಸುಂದರವಾಗಿದೆ.
    ಅದರಲ್ಲಿಯ ಹತಾಶೆ,ನೋವು,ಕೊನೆಗೆ ಎಲ್ಲವನ್ನೂ ಒಪ್ಪಿಕೊಳ್ಳುವ ಸಹನೆ ಹಾಗು ಕ್ಷಮಾಗುಣ ಮನಮುಟ್ಟುತ್ತದೆ.

    ReplyDelete
    Replies
    1. ತಮ್ಮ ಮೆಚ್ವುಗೆಗೆ ಧನ್ಯವಾದಗಳು

      Delete
  2. ಈ ಕವನ ತುಂಬಾ ಅರ್ಥ ಗರ್ಭಿತವಾಗಿದೆ

    ReplyDelete

Post a Comment

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ

ಇವುಗಳನ್ನೂ ಓದಿ

ಕವಿಗಳಾಧರಿತ ಪ್ರಶ್ನೆಗಳು

1."ಆದಿಕವಿ" ಮತ್ತು "ಕನ್ನಡದ ಕಾವ್ಯ ಪಿತಾಮಹ" ಎಂದು ಯಾರನ್ನು ಕರೆಯುತ್ತಾರೆ? A). ಪಂಪ B). ರನ್ನ C). ಜನ್ನ D). ಪೊನ್ನ Correct Ans: (A) Description: ಪಂಪ ಪಂಪ ಒಬ್ಬ ಪ್ರಸಿದ್ಧ ಕನ್ನಡದ ಕವಿ. ಪಂಪನ ಪ್ರಮುಖ ಎರಡು ಕಾವ್ಯಗಳೆಂದರೆ ಒಂದು ಆದಿಪುರಾ...