Skip to main content

ಅವ್ವ ಮತ್ತು ಆಲದಮರ @ ಶಿವಾನಂದ ಉಳ್ಳಿಗೇರಿ

    ಶಿವಾನಂದ ಉಳ್ಳಿಗೇರಿ ಅವರ ಅವ್ವ ಮತ್ತು ಆಲದ ಮರ ಕವನ ಸಂಕಲನವು ಒಂದೇ ಗುಕ್ಕಿನಲ್ಲಿ ಓದಿಸಿಕೊಂಡು ಹೋಗುತ್ತದೆ. ಅಂದದ ಮುಖಪುಟ ವಿನ್ಯಾಸ ಹಾಗೂ ಒಳಪುಟಗಳಲ್ಲಿ ಚಂದನೆಯ ಚಿತ್ರಗಳು ಓದುಗರ  ಮನಸೆಳೆಯುತ್ತವೆ. ಅವ್ವನ ಮೇಲಿರುವ ಅವರ ಅತಿಯಾದ ಪ್ರೀತಿಯು ಕಾವ್ಯ ರೂಪವನ್ನು ಪಡೆದಿದೆ.

   ಶಿವಾನಂದ್ ಉಳ್ಳಿಗೇರಿ ಅವರ ಬಹಳಷ್ಟು ಕವಿತೆಗಳಲ್ಲಿ ತಮ್ಮನ್ನು ತಾವೇ ಸಂತೈಸಿಕೊಂಡು ಸಾಗುವ, ಬದುಕಿಗೆ ಪ್ರೇರಣೆ ಆಗಬಲ್ಲ, ಬದುಕಿನ ಬಗ್ಗೆ ಆಶಾಕಿರಣ ಮೂಡಿಸಬಲ್ಲ ಸಾಲುಗಳನ್ನು ಬರೆದಿದ್ದಾರೆ.
ಕವಿಯ ಹೃದಯದ ತುಮುಲಗಳನ್ನು ಅವರ ಅವ್ವ ಮತ್ತು ಆಲದ ಮರ ಕಾವ್ಯ ಸಂಕಲನದಲ್ಲಿ ಕಾಣಬಹುದು. ಒಮ್ಮೆ ಬರಗಾಲಕ್ಕೆ ಕವಿಯ ಹೃದಯ ಮರುಗಿದರೆ ಮತ್ತೊಮ್ಮೆ ಬಿರುಸಾಗಿ ಸುರಿಯುವ ಮಳೆಯ ಕುರಿತು ಅವರ ಭಾವ ಕಾವ್ಯ ಝರಿಯಾಗಿ ಹರಿಯುತ್ತದೆ.


    ಪ್ರೀತಿ ಇಲ್ಲದೆ  ಕವಿತೆ ಸಾಧ್ಯವಿಲ್ಲ ಎನ್ನುವಂತೆ ಪ್ರಸ್ತುತ ಸಂಕಲನದಲ್ಲಿ ತಮ್ಮ ಪ್ರೇಯಸಿಯನ್ನು  ನೆನಪಿಸಿಕೊಳ್ಳದೆ, ಅವಳ ಸುತ್ತ ಕವಿತೆ ಕಟ್ಟದೆ ಇರಲಾಗದೆ ಶಿವಾನಂದರವರು ಸಹಜವಾಗಿಯೇ ಪ್ರೀತಿಯ ಸಾಲುಗಳನ್ನು ಬರೆಯುತ್ತಾರೆ. ಅವ್ವನ ರೂಪವೇ ಅಕ್ಕ ಎನ್ನುವುದನ್ನು ಅವರು ಕವಿತೆಯಲ್ಲಿ ಅಕ್ಕನ ಜೊತೆ ಒಡನಾಡಿದ ಸಂದರ್ಭಗಳನ್ನು ಸೆರೆಹಿಡಿಯುತ್ತಾರೆ. ಅಪ್ಪನ ಪ್ರೀತಿಯಿಂದ ವಂಚಿತರಾದ  ತಮ್ಮ ಮನದ ಆರ್ತನಾದವನ್ನು ಅಪ್ಪ ಎಂಬ ಕವಿತೆಯಲ್ಲಿ ಓದುಗರ ಎದೆಗೆ ಆಪ್ತವಾಗಿ ಇಳಿಸಿ ಬಿಡುತ್ತಾರೆ.

    ಮೊದಲ ಕವನ ಸಂಕಲನದ ಕೆಲವು ಕವಿತೆಗಳು ಓದುಗರನ್ನು ಚಿಂತನೆಗೆ ಹಚ್ಚುತ್ತವೆ. ಪ್ರಸ್ತುತ ಮೊಬೈಲ್ ಬಳಕೆಯಿಂದ ಆಗುವ ದುಷ್ಪರಿಣಾಮಗಳಿಗಾಗಿ, ಜಾಗತಿಕ ತಾಪಮಾನ  ಏರಿಕೆಗೆ ಕವಿ ಮರುಗುವುದುರೊಂದಿಗೆ ವೈಯಕ್ತಿಕ ಬದುಕಿನ ತುಮುಲ ತಲ್ಲಣಗಳಲ್ಲಿ ಇಲ್ಲಿ ಕಾವ್ಯವಸ್ತು ಉಸಿರಾಡುತ್ತಿದೆ. ಅವ್ವ ಮತ್ತು ಆಲದ ಮರ ಸಾಹಿತ್ಯಲೋಕದಲ್ಲಿ ಅಮರ.
ಅವರ ಮುಂದಿನ ಸಾಹಿತ್ಯ ಪಯಣಕೆ ಶುಭವಾಗಲಿ.

ಶ್ರೀ ಆನಂದ ಮಾಲಗಿತ್ತಿಮಠ

ಸಾಹಿತಿಗಳು ,ಬೈಲಹೊಂಗಲ

Comments

ಇವುಗಳನ್ನೂ ಓದಿ

ಮೌರ್ಯ ಸಾಮ್ರಾಜ್ಯ ,ಆಡಳಿತ

ಮೌರ್ಯ ಸಾಮ್ರಾಜ್ಯದ ಆಡಳಿತ ಭಾರತದ ಮೆಕೈವರ ಎನಿಸಿದ್ದು - ಕೌಟಿಲ್ಯ ಕರ್ನಾಟಕದಲ್ಲಿ ದೊರೆತಿರುವ ಅಶೋಕನ ಒಟ್ಟು ಶಾಸನಗಳು - ೧೮ ಮೌರ್ಯರ ಆಡಳಿತದಲ್ಲಿ ನಗರಾಡಳಿತದ ಅಧಿಕಾರಿ - ನಗರ ವ್ಯವಹಾರಿಕ ಭೂಮಿಯ ಅಳತೆ, ಮಾಲೀಕತ್ವ, ಮತ್ತು ಭೂಕಂದಾಯ ಮೇಲ್ವಿಚಾರಣಾಧಿಕಾರಿ - ರಜ್ಜುಕ ಭೂಮಿಯ ಉತ್ಪನ್ನದಲ್ಲಿ ನೀಡಬೇಕಾದ ಭೂಕಂದಾಯ - ಆರನೆಯ ಒಂದು ಭಾಗ ಧರ್ಮ ಮಹಾಮಾತ್ರರ ಪ್ರಮುಖ ಕಾರ್ಯ - ನ್ಯಾಯ ತೀರ್ಮಾನ ಮತ್ತು ಧರ್ಮ ಪ್ರಚಾರ ಸಾರ್ವಜನಿಕ ಹಿತವನ್ನು ಗಮನಿಸುವ ಅಧಿಕಾರಿ - ವಜ್ರಭೂಮಿಕ ವಜ್ರಭೂಮಿಕನ ಮುಖ್ಯ  ಕಾರ್ಯಗಳು - ಭಾವಿ,ರಸ್ತೆ,ತೋಪುಗಳ ನಿರ್ಮಾಣ ಮೌರ್ಯರ ಕಾಲದಲ್ಲಿಯ ಪ್ರಾಂತ್ಯಗಳು - ಪ್ರಾಚ್ಯ, ( ತಕ್ಷಶಿಲೆ) ಉತ್ತರಾಪಥ (ಉಜ್ಜಯಿನಿ) ಅವಂತೀ ( ಕೋಸಲ) ದಕ್ಷಿಣಾಪಥ ( ಸುವರ್ಣಗಿರಿ) ಅಶೋಕನ ಕಾಲದಲ್ಲಿ ಸೇರಿಸಲ್ಪಟ್ಟ ೫ ನೇ ಪ್ರಾಂತ್ಯ - ಕಳಿಂಗ್ ಗ್ರಾಮಗಳ ಆಡಳಿತ ನಿರ್ವಹಣಾಧಿಕಾರಿ - ಗ್ರಾಮಿಕ ಹತ್ತು ಗ್ರಾಮಗಳ ಮೇಲ್ವಿಚಾರಕ - ಗೋಪ ಪ್ರಾಂತಗಳ ಕೆಳಗಿನ ಜನಪದಗಳ ಮೇಲ್ವಿಚಾರಕ - ಸಮಹರತೃ ಮೌರ್ಯರ ಆಡಳಿತ ಮೊಘಲರ ಆಡಳಿತಕ್ಕಿಂತ ಮೇಲಾಗಿತ್ತು ಎದಿರುವ ಇತಿಹಾಸಜ್ಞ - ವಿನ್ಸೆಂಟ್ ಸ್ಮಿತ್ ಕೌಟಿಲ್ಯನ ಅರ್ಥಶಾಸ್ತ್ರ  ಹಸ್ತಪ್ರತಿಯನ್ನು ಪತ್ತೆ ಹಚ್ಚಿ ಆದುನಿಕ ಜಗತ್ತಿಗೆ ಸಿಗುವಂತೆ ಮುದ್ರಿಸಿ ಪ್ರಕಟಿಸಿದವರು-ಮೈಸೂರಿನ ಶಾಮಾಶಾಸ್ತ್ರಿಗಳು ಮೌರ್ಯರ ಕಾಲದ ಶಿಕ್ಷೆ ಕ್ರಿಮಿನಲ್ ಅಪರಾಧ - ಮರಣದಂಡನೆ ನೀಡಲಾಗುತ್ತಿತ...