Skip to main content

ಗೋಡೆ @ ಆನಂದ ಮಾಲಗಿತ್ತಿಮಠ ಕವಿತೆ

ಒಂದು ಸಹಾಯ ಮಾಡಿ
ಬಡ ಗೋಡೆಯೆಂದು ಹೊರಡಬೇಡಿ
ನಡು ಬಾಗಿದರೂ ತೊಲೆ ಹೊತ್ತು
ನಿಂತಿರುವೆ ಮುದಿಯೆಂದು ತೆಗಳಬೇಡಿ

ಮೈತುಂಬ ಮದರಂಗಿ ಕೆಂಪು ಗಾಯಗಳು
ಸಮರದ ಗುಂಡು ತಾಗಿದುದಲ್ಲ
ಕಲೆತವರ ಉಳಿಯೇಟಿನ ಕಲೆಗಳವು
ಕಲೆಗಾರರು ಚಿತ್ರಿಪ ಸುಂದರ ಶಿಲ್ಪಗಳಲ್ಲ

ಸಿಗರೇಟಿನ ಮೋತಿ ನೀಡಿದ ಮುತ್ತುಗಳು
ಕನ್ಯೆಯ ಕೆನ್ನೆಗಿಟ್ಟ ದೃಷ್ಠಿ ಬೊಟ್ಟುಗಳಲ್ಲ
ಸುಟ್ಟ ಮನದ ಸೋರು ಛಾವಣಿ ಹನಿಗಳು
ಕರುಣೆ ಪಡೆಯಲು ಮಾಡಿದ ಪಟ್ಟುಗಳಲ್ಲ

ತಾಂಬೂಲು ತಿಂದುಗಿದ ಚಿತ್ತಾರಗಳು
ಪಾತಿರ್ವತೆಯ ಕೆಂಪು ಸಿಂಧೂರವಲ್ಲ
ಸಾರಾಯಿ ಅಮಲಿನಲಿ ಕಕ್ಕಿದ ಅನ್ನದಗುಳು
ಅಂಗಳದಲಿಟ್ಟ ಶುಭ ರಂಗೋಲಿಯಲ್ಲ

ಒಂದು ಸಹಾಯ ಮಾಡಿ
ನಾನು ಸರ್ಕಾರಿ ಶಾಲೆ ಗೋಡೆ
ನಿಲ್ಲಿಸಿಬಿಡಿ ಇಂತಹ ಅತ್ಯಾಚಾರ

Comments

  1. ಸೊಗಸಾದ ರೂಪಕಗಳಿಂದ ಕಟ್ಟಿದ ಗೋಡೆ

    ReplyDelete
  2. ಧನ್ಯವಾದಗಳು ಸರ್

    ReplyDelete

Post a Comment

ನಿಮ್ಮ ಅಭಿಪ್ರಾಯ ಹಂಚಿಕೊಳ್ಳಿ

ಇವುಗಳನ್ನೂ ಓದಿ

ಕವಿಗಳಾಧರಿತ ಪ್ರಶ್ನೆಗಳು

1."ಆದಿಕವಿ" ಮತ್ತು "ಕನ್ನಡದ ಕಾವ್ಯ ಪಿತಾಮಹ" ಎಂದು ಯಾರನ್ನು ಕರೆಯುತ್ತಾರೆ? A). ಪಂಪ B). ರನ್ನ C). ಜನ್ನ D). ಪೊನ್ನ Correct Ans: (A) Description: ಪಂಪ ಪಂಪ ಒಬ್ಬ ಪ್ರಸಿದ್ಧ ಕನ್ನಡದ ಕವಿ. ಪಂಪನ ಪ್ರಮುಖ ಎರಡು ಕಾವ್ಯಗಳೆಂದರೆ ಒಂದು ಆದಿಪುರಾ...